ಪ್ರವಾಸಿ ತಾಣಗಳ ಮರಗಳು, ಶಿಲ್ಪಗಳ ಮೇಲೆ ಶಾಶ್ವತವಾಗಿ ಉಳಿಯುವಂಥ ಕೆತ್ತನೆ ಕೀಟಲೆಗೆ ಕೈ ಹಾಕಬೇಡಿ.ಇಂಥ ಕ್ರಿಯೆ ಮಾಡುವವರಿಗೆ ತಿಳಿಹೇಳಿ. ಪ್ರಯಾಣಕ್ಕೆ ತೆರಳಿದ ತಾಣ ನೆನಪಿನಲ್ಲಿ ಉಳಿಸಿಕೊಳ್ಳುವ ಮನಸ್ಸು ನಿಮ್ಮದಾಗಿರಲಿ. ಸೂಚನೆ: ಚಿತ್ರಗಳ ಮೇಲೆ ಕ್ಲಿಕ್ಕಿಸಿ ಗ್ರಾತ್ರವನ್ನು ಹಿರಿದಾಗಿಸಿ ಓದುವ ಅನುಕೂಲವಿರುತ್ತದೆ.

Saturday, July 16, 2011

ಆದಿಮ


ಕಳೆದ ಮೂರು ದಶಕಗಳಿಂದ ವಿವಿಧ ಸಾಮಾಜಿಕ ಆಂದೋಲನಗಳಲ್ಲಿ ತೊಡಗಿದ್ದ ಕೆಲವು ಗೆಳೆಯರು ನಮ್ಮ ಸಂಸ್ಕೃತಿಯ ಜೀವಪರ ಬೇರುಗಳನ್ನು ಅರಸಿ ನೀರೂಡಿಸುವ ಕನಸು ಕಂಡರು. ಅದರ ಫಲವಾಗಿ ಕೋಲಾರ ಜಿಲ್ಲೆ ಅಂತರಗಂಗೆ ಬೆಟ್ಟದ ಮೇಲೆ ಜಿಂಕೆ ರಾಮಯ್ಯ ಜೀವತಾಣದಲ್ಲಿ ಆ ಗೆಳೆಯರು ಕೂಡಿ ಆರಂಭಿಸಿದ ನಡಿಗೆಯೇ ಆದಿಮ.

ಇರುವೆಗಳು ಗೂಡು ಕಟ್ಟುವ ಹಾಗೆ ಹತ್ತಾರು ವರ್ಷಗಳ ಕಾಲ ಎಷ್ಟೋ ಮಂದಿ ಸಮಾನ ಮನಸ್ಕರು ದಿನಕ್ಕೊಂದು ರೂಪಾಯಿಯ ಹಾಗೆ ಸಂಗ್ರಹಿಸಿದ ಮೊತ್ತವೇ ಆದಿಮದ ಮೂಲ ನಿಧಿ. ಆ ಹಣದಲ್ಲಿ ಮೊದಲಿಗೆ ಮಣ್ಣಿನ ಕುಟೀರವೊಂದನ್ನು ಕಟ್ಟಿಕೊಂಡು ಆದಿಮ ತನ್ನ ನಡೆ ಆರಂಭಿಸಿತು. ಆಗಿನಿಂದ ಜಾತಿ ಮತ ಅಂತಸ್ತುಗಳಾಚೆ, ಹೆಚ್ಚಾಗಿ ಮಕ್ಕಳ ಚಟುವಟಿಕೆಗಳ ಸುತ್ತಲೇ ಆದಿಮ ಸಾಂಸ್ಕೃತಿಕ ಎಚ್ಚರದ ದಿಕ್ಕಿನಲ್ಲಿ ಹೆಜ್ಜೆಗಳನ್ನಿಡುತ್ತ ಬಂದಿದೆ. ನಿರ್ಲಕ್ಷಿತ ಸಾಂಸ್ಕೃತಿಕ ಸಮುದಾಯಗಳ ಅಂತರಂಗದ ಚಿಲುಮೆಯಾಗಲು ಯತ್ನಿಸುತ್ತ ಆ ಸಮೂಹದ ಘನತೆಯನ್ನು ಎತ್ತರಿಸುತ್ತ ಬಂದಿದೆ.



ಸದ್ಯದ ಹಲ ಬಗೆಯ ಬಿಕ್ಕಟ್ಟುಗಳಿಗೆ ನಮ್ಮ ಸಾಂಸ್ಕೃತಿಕ ಬೇರುಗಳಲ್ಲೇ ಜೀವಪರ ಉತ್ತರಗಳನ್ನು ಹುಡುಕುವುದು ಆದಿಮದ ಆಶಯ.



ಆ ನಿಟ್ಟಿನಲ್ಲಿ ಆದಿಮ ಮಕ್ಕಳ ಸುಪ್ತ ಪ್ರತಿಭೆಗೆ ನೀರೆರೆದು ಅಗತ್ಯ ತರಬೇತಿ ನೀಡುತ್ತ ನಮ್ಮ ದಿಕ್ಕೇಡಿ ಆಧುನಿಕ ಜಗತ್ತಿನ ಸವಾಲುಗಳಿಗೆ ಅವರನ್ನು ಸಜ್ಜುಗೊಳಿಸುತ್ತಿದೆ. ಈ ನಡಿಗೆ, ಹಾಡು, ನೃತ್ಯರೂಪಕ, ನಾಟಕ ಮುಂತಾದ ಸಮೂಹ ಕಲೆಗಳ ಸಂಭ್ರಮದ ಮೂಲಕ ಸಾಕಾರಗೊಳ್ಳುತ್ತಿದೆ.

ಎಳೆಯರಷ್ಟೇ ಅಲ್ಲದೆ, ನಿರಂತರ ಸಂವಾದ-ವಾಗ್ವಾದಗಳ ಮೂಲಕ ಎಲ್ಲದರಲ್ಲೂ ಸಾಂಸ್ಕೃತಿಕ ಎಚ್ಚರ ತರುವುದು ಆದಿಮದ ಕಾಳಜಿ.

ಬನ್ನಿ, ಜೀವರಕ್ಷಣೆಗೆ ಸಮನಾದ ಈ ಪಯಣದಲ್ಲಿ ಜೊತೆಯಾಗಿ ಹೆಜ್ಜೆಯಿಡೋಣ.

ಹುಣ್ಣಿಮೆ ಹಾಡು- ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ......
ಪ್ರತಿ ಹುಣ್ಣಿಮೆ ರಾತ್ರಿ ಬೆಟ್ಟದ ಮೇಲೆ ನಡೆಯುವ ಹುಣ್ಣಿಮೆ ಹಾಡು- ಆದಿಮದ ಬಹು ಮುಖ್ಯ ಸಾಂಸ್ಕೃತಿಕ ಚಟುವಟಿಕೆಗಳಲ್ಲೊಂದು.
ನಾಟಕ, ಹಾಡು, ಹಸೆ, ನೃತ್ಯ ಹಾಗೂ ವಿವಿಧ ಜಾನಪದ ಕಲಾ ಪ್ರಕಾರಗಳ ಪ್ರದರ್ಶನ- ಹೀಗೆ ಬಹು ವಿಧದ ಕಾರ್ಯಕ್ರಮಗಳು ತಿಂಗಳು ತಿಂಗಳೂ ತಪ್ಪದೆ ನಡೆಯುತ್ತ ಬಂದಿವೆ.
ಹುಣ್ಣಿಮೆ ಹಾಡು ಇಂದು ಜಿಲ್ಲೆಯ ಸಾಂಸ್ಕೃತಿಕ ಹೆಗ್ಗುರುತುಗಳಲ್ಲೊಂದಾಗಿ ಬೆಳೆದಿರುವುದರಿಂದಲೇ ಪ್ರತಿ ಕಾರ್ಯಕ್ರಮಕ್ಕೂ ಸಾವಿರಾರು ಜನ ಸೇರಿ ಉತ್ಸಾಹದಿಂದ ಪಾಲ್ಗೊಂಡು ಹಬ್ಬದ ವಾತಾವರಣ ಸೃಷ್ಟಿಸುತ್ತಾರೆ.


ಆದಿಮ ನಡೆ- ತರಬೇತಿ, ಪ್ರಯೋಗ, ಪ್ರದರ್ಶನ
ಕಳೆದ ಸಾಲಿನಲ್ಲಿ ನುರಿತ ರಂಗಪಟುಗಳಿಂದ ಯುವಕ-ಯುವತಿಯರಿಗೆ ತರಬೇತಿ ನೀಡಿ ಆದಿಮ ಸಿದ್ಧಪಡಿಸಿದ ನೃತ್ಯ ರೂಪಕಗಳು ಮೂರು- ಹಕ್ಕಿಹಾಡು, ಕಿನ್ನರಿ ನುಡಿದೋ ಮತ್ತು ಅಣ್ಣಾ ಹಜಾರೆ. ಆದಿಮದ ಈ ಅರೆ ರೆಪರ್ಟರಿ ಐದು ತಿಂಗಳ ಕಾಲ ಅನೇಕ ಕಡೆಗಳಲ್ಲಿ ಯಶಸ್ವಿ ಪ್ರದರ್ಶನ ನೀಡಿದೆ.
ಹೀಗೆ ಪ್ರತಿ ವರ್ಷವೂ ಒಂದೊಂದು ಹೊಸ ತಂಡ ರೂಪುಗೊಳ್ಳುತ್ತದೆ.



ಚುಕ್ಕಿಮೇಳ- ಮಕ್ಕಳ ಬೇಸಿಗೆ ಶಿಬಿರ
1999ರಿಂದ ಚೌಕಿ ಸಂಸ್ಕೃತಿ ಕೇಂದ್ರದ ಮೂಲಕ ಪ್ರತಿ ವರ್ಷವೂ ಚುಕ್ಕಿಮೇಳ- ಮಕ್ಕಳ ಬೇಸಿಗೆ ಶಿಬಿರಗಳನ್ನು ಅತ್ಯಂತ ಸಾರ್ಥಕವಾಗಿ ನಿರ್ವಹಿಸಲಾಗುತ್ತಿದೆ. ಇದರೊಂದಿಗೆ, ಕನ್ನಡ ರಂಗಭೂಮಿಗೆ ಹತ್ತಕ್ಕೂ ಹೆಚ್ಚು ಹೊಸ ನಾಟಕಗಳು ಕೊಡುಗೆಯಾಗಿ ಸಂದಿವೆ.
ಇದೀಗ ಚುಕ್ಕಿಮೇಳವನ್ನು ಆದಿಮ ಕೇಂದ್ರದಲ್ಲೇ ಆಯೋಜಿಸಲಾಗುತ್ತಿದೆ.

ಆದಿಮ ಪ್ರಕಾಶನ
ಅರ್ಥಪೂರ್ಣ ಸಾಂಸ್ಕೃತಿಕ ಸಂವಾದದ ಆಶಯಕ್ಕೆ ಪೂರಕವಾದ ಮತ್ತೊಂದು ಚಟುವಟಿಕೆ- ಪುಸ್ತಕಗಳ ಪ್ರಕಟಣೆ. ಈ ನಿಟ್ಟಿನಲ್ಲಿ ಆದಿಮ ಪ್ರಕಾಶನ ಈವರೆಗೆ ಮಹತ್ವದ ಐದು ಕೃತಿಗಳನ್ನು ಹೊರತಂದಿದೆ:
1. ಆವರಣ ಅನಾವರಣ- ಎನ್.ಎಸ್.ಶಂಕರ್.
ಎಸ್.ಎಲ್.ಭೈರಪ್ಪನವರ ಕೋಮುವಾದಿ ಪ್ರಣಾಳಿಕೆಯ ಕಾದಂಬರಿ ಆವರಣಕ್ಕೆ
ಸಮರ್ಥ ಪ್ರತಿಕ್ರಿಯೆ. ನಾಡಿನ ಸಾಂಸ್ಕೃತಿಕ ವಲಯದಲ್ಲಿ ಹೊಸ ವಾಗ್ವಾದವನ್ನು
ಹುಟ್ಟುಹಾಕಿದ ಹೊತ್ತಗೆ.
2. ಕನಕ ಮುಸುಕು- ಡಾ.ಕೆ.ಎನ್.ಗಣೇಶಯ್ಯ
ಕನ್ನಡಕ್ಕೇ ವಿಶಿಷ್ಟವಾದ ಇತಿಹಾಸ ಸಂಶೋಧನೆ ಆಧಾರಿತ ಕೌತುಕಮಯ ಕಾದಂಬರಿ.
3. ಸಾಮಾನ್ಯನ ಸಂಕ್ರಮಣ- ಎನ್.ಎಸ್.ಹಾಲಪ್ಪ
ಸಾಮಾನ್ಯನೊಬ್ಬನ ಸ್ವಾತಂತ್ರ್ಯ ಹೋರಾಟ ಅನುಭವದ ಅಪರೂಪದ ದಾಖಲೆ.
4. ಕಾರಿಡಾರ್ ಕಾಲಕೋಶ- ಜೆಸುನಾ
ಹಿರಿಯ ಪತ್ರಕರ್ತ ಜೆಸುನಾ ನೀಡಿದ- ನಮ್ಮ ರಾಜಕೀಯ ನಾಯಕರ ದೈನಂದಿನದ ಆಪ್ತ ಚಿತ್ರಣ.
5. ಬ್ರಾಹ್ಮಣ ಧರ್ಮದ ದಿಗ್ವಿಜಯ- ಡಾ.ಬಿ.ಆರ್.ಅಂಬೇಡ್ಕರ್
ಕನ್ನಡಕ್ಕೆ:ಎನ್.ಎಸ್.ಶಂಕರ್. ಹಿಂದೂ ಚರಿತ್ರೆಯಲ್ಲಿ ಆಸಕ್ತಿ ಉಳ್ಳವರೆಲ್ಲರೂ
ಕಡ್ಡಾಯವಾಗಿ ಓದಬೇಕಾದ- ಅಂಬೇಡ್ಕರರ ಸ್ಫೋಟಕ ಸಂಶೋಧನಾ ಕೃತಿಯ
ಕನ್ನಡಾನುವಾದ.
******

ನಮ್ಮೊಂದಿಗೆ ನೀವೂ ಹೆಜ್ಜೆಗೂಡಿಸುವಂತಿದ್ದರೆ, ನೀವು
* ದಿನಕ್ಕೊಂದು ರೂಪಾಯಿ ಕೂಡಿಸಿ ನೀಡುವ ಮೂಲಕ ಆದಿಮದ ಸದಸ್ಯರಾಗಬಹುದು
* ಆದಿಮ ಕಾರ್ಯ ಚಟುವಟಿಕೆಗಳಿಗೆ ನಿಮ್ಮಿಂದಾದಷ್ಟು ಹಣದ ನೆರವು ನೀಡುವ ಮೂಲಕ ನಮ್ಮ
ಬಳಗದಲ್ಲಿ ಒಬ್ಬರಾಗಬಹುದು
* ಆದಿಮ ರೆಪರ್ಟರಿಯ ಪ್ರಯೋಗಗಳನ್ನು ಆಹ್ವಾನಿಸಿ ನಿಮ್ಮ ಶಾಲೆ/ಸಮಾರಂಭಗಳಲ್ಲಿ ಅರ್ಥಪೂರ್ಣ
ಮನರಂಜನೆ ಒದಗಿಸುವ ಮೂಲಕವೂ ಆದಿಮಕ್ಕೆ ನೆರವಾಗಬಹುದು
* ಆದಿಮ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ನೀಡಬಹುದು.

ನಿಮ್ಮ ಸಲಹೆ ಸೂಚನೆಗಳಿಗೂ ಸ್ವಾಗತ.


ಬ್ಯಾಂಕ್ ಖಾತೆ: ಕೆನರಾ ಬ್ಯಾಂಕ್, ಕೋಲಾರ
ಖಾತೆಯ ಹೆಸರು: ಆದಿಮ ಸಾಂಸ್ಕೃತಿಕ ಸಂಘಟನೆ
ಖಾತೆ ಸಂಖ್ಯೆ: 0539101025242
ವಿಳಾಸ:

ಆದಿಮ
ಜಿಂಕೆ ರಾಮಯ್ಯ ಜೀವತಾಣ
ಶಿವಗಂಗೆ, ಮಡೇರಹಳ್ಳಿ ಅಂಚೆ
ಕೋಲಾರ-563 101

ಫೋನ್: 08892769414
ಇ-ಮೇಲ್: adimaramaiah@gmail.com

ಮುರುಗನ್ ಗೆ ನಮನ


ದೇಶದ ಉತ್ತಮ ನ್ಯಾಷನಲ್ ಪಾರ್ಕ್ ಗಳು


ಸೊಬಗಿನ ಶಿರಲೆ


ಶರಾವತಿ ಪ್ರಕೃತಿ ಶಿಬಿರ


ಪುದುಚೇರಿ


ಇರ್ಪು ಫಾಲ್ಸ್ ವೈಭವ


ಬನ್ನೇರುಘಟ್ಟ


ಅರಿಜೋನಾ ಇನ್ನು ಹರಿಝೋನ್