ಪ್ರವಾಸಿ ತಾಣಗಳ ಮರಗಳು, ಶಿಲ್ಪಗಳ ಮೇಲೆ ಶಾಶ್ವತವಾಗಿ ಉಳಿಯುವಂಥ ಕೆತ್ತನೆ ಕೀಟಲೆಗೆ ಕೈ ಹಾಕಬೇಡಿ.ಇಂಥ ಕ್ರಿಯೆ ಮಾಡುವವರಿಗೆ ತಿಳಿಹೇಳಿ. ಪ್ರಯಾಣಕ್ಕೆ ತೆರಳಿದ ತಾಣ ನೆನಪಿನಲ್ಲಿ ಉಳಿಸಿಕೊಳ್ಳುವ ಮನಸ್ಸು ನಿಮ್ಮದಾಗಿರಲಿ. ಸೂಚನೆ: ಚಿತ್ರಗಳ ಮೇಲೆ ಕ್ಲಿಕ್ಕಿಸಿ ಗ್ರಾತ್ರವನ್ನು ಹಿರಿದಾಗಿಸಿ ಓದುವ ಅನುಕೂಲವಿರುತ್ತದೆ.

Friday, August 26, 2011

ಕಿತ್ತೂರಿನ ಕೋಟೆ



ಕಿತ್ತೂರಿನ ಕೋಟೆಯು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ರಾಣಿ ಚನ್ನಮ್ಮಳ ಧೈರ್ಯ ಸಾಹಸದ ಪ್ರತಿಕವಾಗಿ ನಿಂತಿದೆ. ದತ್ತು ಪುತ್ರನನ್ನು ರಾಜನ ಉತ್ತರಾಧಿಕಾರಿಯಾಗಿ ಮನ್ನಿಸಲಾಗುವುದಿಲ್ಲ ಎಂಬ ಬ್ರಟಿಷರ ಕುತಂತ್ರದ ವಿರುದ್ಧ ಸಿಡಿದೆದ್ದ ರಾಣಿ ಚನ್ನಮ್ಮ ತನ್ನ ಕೋಟೆಯನ್ನು ಉಳಿಸಿಕೊಳ್ಳಲು ಬ್ರಿಟಿಷರ ವಿರುದ್ಧ ಘೋರ ಯುದ್ಧವನ್ನು ಸಾರಿದಳು. ಈ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದ ಚನ್ನಮ್ಮ ಈಗಲೂ ಸ್ತ್ರೀ ಕುಲಕ್ಕೆ ಆದರ್ಶಪ್ರಾಯಳಾಗಿದ್ದಾಳೆ.

No comments:

Post a Comment